Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More