Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More
Exit mobile version