Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More