Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು.  ಸಮ ಸಮಾಜ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More
Exit mobile version