Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ:  ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು,  ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ  ಸಾವು ಕಂಡಿದ್ದಾನೆ. ಸೀಗೆಹಟ್ಟಿಯ ಅಡುಗೆ ಕಂಟ್ರ್ಯಾಕ್ಟರ್  ಕಾಂತರಾಜ್ ನವರ ಪುತ್ರ ಉಲ್ಲಾಸ್ (21) ಸಾವು ಕಂಡ ದುರ್ದೈವಿಯಾಗಿದ್ದಾನೆ.  ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಉಲ್ಲಾಸ್ (20)  ಜೆಎನ್ ಎನ್…

Read More

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ:   ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ  ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More