Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು. ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ …

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More
Exit mobile version