Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ…

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ…

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ…

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು,…

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ…

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ…

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ…

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ…

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು…