Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More