Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – 14 ಬೈಕ್ ಸಮೇತ ಆರು ಜನ ಆರೋಪಿಗಳ ಬಂಧನ

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್‌ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್‌ಐ ನಿಂಗರಾಜ್…

Read More

RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More
Exit mobile version