Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More