Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ honeytrap

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ ತೀರ್ಥಹಳ್ಳಿ : ಫೇಸ್ಬುಕ್ ನಲ್ಲಿ ಪರಿಚಯಯವಾಗಿ ಸ್ನೇಹ ಸಲುಗೆ ನಂತರ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿರುವುದಾಗಿ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ಪ್ರತಿ ದೂರು ದಾಖಲಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಆಗುಂಬೆ ಸಮೀಪದ ಗ್ರಾಮವೊಂದರ ಪುರುಷ ಹಾಗೂ ಮಹಿಳೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಚಾಟ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ಕಾಲ್ ಸಹ ಮಾಡಿಕೊಂಡಿದ್ದಾರೆ. ಈ ವಿಚಾರ…

Read More

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
Exit mobile version