Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಶವ ಪೂರ್ಣ ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು ಗುರುತಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ. ನದಿಗೆ ಬಿದ್ದು ಅನೇಕ ದಿನಗಳು ಕಳೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ನದಿ ಹರಿಯುತ್ತಿದ್ದ ಸಂದರ್ಭದಲ್ಲಿ ತೇಲಿ ಬಂದಿರುವ ಶಂಕೆ ಕೂಡ ಇದೆ. ಸ್ಥಳೀಯರು ಗುರುತು ಸಿಗದ ದೇಹವನ್ನು ವೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ಮಾಡಿದ್ದಾರೆ. ಮಾಳೂರು ಪೊಲೀಸ್‌…

Read More

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್ ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು. ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ…

Read More

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಮೆಕ್ಕಾ ಜುಮ್ಮಾ ಮಸೀದಿ ವತಿಯಿಂದ ಶನಿವಾರ ಸಂಜೆ 5.30 ಕ್ಕೆ ಮಸೀದಿ ಆವರಣದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನದ ಅಂಗವಾಗಿ ಜಶ್ನೇ ಈದ್ ಮಿಲಾದುನ್ನಭಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮೆಕ್ಕಾ ಮಸೀದಿಯ ಈದ್ ಮಿಲಾದ್ ಸಮಿತಿ ಅಧ್ಯಕ್ಷರಾದ ಇರ್ಫ಼ಾನ್ ಹಾಗೂ ಪ್ರಧಾನ ಕಾರ್ಯದರ್ಶಿ ನಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌. ಶನಿವಾರ ಸಂಜೆ 5.30 ಕ್ಕೆ ಮೆಕ್ಕಾ ಮಸೀದಿಯ ಧರ್ಮಗುರು…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More