Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ  ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ್ ನಲ್ಲಿ ಕಣ್ಮನ ಸೆಳೆಯುವ ಪಟ್ಟಣಗೊಂಬೆ ಪ್ರದರ್ಶನ

ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ. ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ. ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು,…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More