Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ….

Read More