Headlines

postmannews

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More