Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More