Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More

Shivamogga: ನಿಂತಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಡಿಕ್ಕಿ – ಚಾಲಕ ಗಂಭೀರ

ಶಿವಮೊಗ್ಗ: ಟಿಪ್ಪರ್ ಲಾರಿಗೆ ಆಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್‌ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಮಲವಗೊಪ್ಪ ಸಮೀಪದಲ್ಲಿ ನಡೆದಿದೆ. ನಿಲ್ಲಿಸಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ.ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌  ಮಲವಗೊಪ್ಪದ  ಬಳಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.

Read More

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ. ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.  ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More