Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಮೇಲ್ಛಾವಣಿ…

Read More

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read More

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More