Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! | Hill collapse in Shirur – Seven people died.

ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ  ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…

Read More