Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

Ripponpete | ಹಾವು ಕಡಿದು ರೈತ ಮಹಿಳೆ ಸಾವು

Ripponpete | ಹಾವು ಕಡಿದು ರೈತ ಮಹಿಳೆ ಸಾವು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ವೀಣಾ ಕೋಂ ಸತೀಶ್ (35) ಮೃತ ಮಹಿಳೆಯಾಗಿದ್ದಾರೆ.  ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಎಡಗಾಲಿನ ಕಿರುಬೆರಳಿಗೆ ಹಾವು ಕಚ್ಚಿದೆ.ಕೂಡಲೇ ನಾಟಿ ಔಷಧಕ್ಕಾಗಿ ಗೆಣಸಿನ ಕುಣಿಗೆ ಕರೆದುಕೊಂಡು ಹೋಗಿ ಆ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ…

Read More

Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More