Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ :  ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌…

Read More

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್‌ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…

Read More

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read More