Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More