Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More