ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ?…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More