Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More