Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…

Read More

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…

Read More

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಇಂದು ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಯಿತು ನೀರು ಬಿಡುವ ವಿಷಯ ತಿಳಿಯುತಿದ್ದಂತೆ ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್‌ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು. ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್‌ ಒಳ ಹರಿವು ಇದೆ. ಈಗ 6 ಸಾವಿರ…

Read More
Exit mobile version