Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…

Read More

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.   ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…

Read More

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್ ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು‌ ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ,…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

Ripponpete |ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಅತಿ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸಿದ್ದು ಪ್ರತಿಯೊಬ್ಬ ಘಟ ನಾಯಕರು …

Read More

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು  ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ತಿರುಪಳಯ್ಯನ ಕೇರಿಯ ಸಂಪತ್‌ ಜ್ಯುವೆಲರಿ ಶಾಪ್‌ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…

Read More