Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು….

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More