Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ | Weather Report

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ Weather Report: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ(Rain)ಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More
Exit mobile version