Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ.  ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.  ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More

Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ

Ripponpete | ಬಸವ ಜಯಂತಿ ಆಚರಣೆ  | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್‌ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More