ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್ ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು. ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More