Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು. 1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕುಟುಂಬಸ್ಥರೊಂದಿಗೆ ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಆಗಮಿಸಿದ ಅವರು ಮತ ಚಲಾಯಿಸಿ ಮಾತನಾಡಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ ಎಂದರು. ಈ ಸಂಧರ್ಭದಲ್ಲಿ ಪತ್ನಿ , ಪುತ್ರ ಅಭಿನಂದನ್ ,ಸೊಸೆ ಶ್ರುತಿ ಅಭಿನಂದನ್ ಹಾಗೂ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More
Exit mobile version