Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್‌ ಮೇಲೆ ಕುಳಿತು ಮಾಲತೇಶ್‌ ಹಿಂದೆ…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು | crime news

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು  ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು  ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್‌ಪೋಸ್ಟ್‌ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16…

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…

Read More

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ಆನಂದಪುರ ಮೂಲದ ಫೋಟೋಗ್ರಾಫರ್  ಅರುಣ್  (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…

Read More