Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಬಳಿಯಲ್ಲಿ ಕಾರಿಗೆ ನಾಯಿ ಅಡ್ಡ ಬಂದು ಕಾರು ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಶಿವಮೊಗ್ಗ ನಗರದ ಪ್ರಜ್ವಲ್ ವಾಲ್ಮಿಖಿ(23) ಮೃತಪಟ್ಟ ಯುವಕನಾಗಿದ್ದಾನೆ. ಮಂಡಗದ್ದೆಗೆ ಭಾನುವಾರದ ಜಾಲಿ ರೈಡ್ ಗೆ ಮುಂದಾಗಿದ್ದ ಶಿವಮೊಗ್ಗ ನಗರದ ಯುವಕರು ಎರಡು ಕಾರಿನಲ್ಲಿ  ತೆರಳಿದ್ದಾರೆ. ಮಂಡಗದ್ದೆಯಲ್ಲಿ ಊಟ ಮುಗಿಸಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ….

Read More

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor ಉಡ (Bengal monitor) ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನ ಅಂಬ್ಲಿಗೋಳ ಅರಣ್ಯ ಇಲಾಖೆಯವರು ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಕಂಟ್ರಿ ಮೇಡ್ ರೈಫಲ್, ಬೇಟೆಯಾಡಿದ 3.220 ಕೆಜಿ ಉಡದ ಮೃತದೇಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳಾದ  ಶಿಕಾರಿಪುರ ತಾಲೂಕಿನ ಮಂಜಪ್ಪ(60), ಈಶ್ವರಪ್ಪ (38) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಂಬ್ಲಿಗೊಳ ವಲಯ ವ್ಯಾಪ್ತಿ ಒಳಗೊಂಡ ಡಿಎಫ್‌ಒ ಸಂತೋಷ್‌ ಕುಮಾರ್‌, ಎಸಿಎಫ್‌…

Read More

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read More