Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned ತತಕ್ಷಣದಿಂದ ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪವರ್‌ ಟಿವಿ…

Read More

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.  ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…

Read More

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More