Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ರಿಪ್ಪನ್‌ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಘೋಷಣೆ ಮಾಡಿರುವ ಈಶ್ವರಪ್ಪ (K.S Eshwarappa) ಅವರನ್ನು ಮನವೊಲಿಸಲು ಬಿಜೆಪಿ (BJP) ನಾಯಕರು ಕಸರತ್ತು ಮಾಡುತ್ತಿದ್ದಾರೆ ಆದರೆ ಈಶ್ವರಪ್ಪ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ‌ ನೀಡುತಿದ್ದಾರೆ. ಇಂದು ಹೊಸನಗರ ತಾಲೂಕಿನ ಹೊಂಬುಜ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ಹೊಂಬುಜ ಜೈನಮಠದ…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತರು…

Read More