Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming

ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming ಹೊಳೆಹೊನ್ನೂರು : ಇಲ್ಲಿನ ಸಮೀಪದ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶಿವಮೊಗ್ಗ ನಗರದ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದೆ. ಯುವಕ ಹೊಳೆಹೊನ್ನೂರು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು,…

Read More

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ ಹೊಸನಗರ : ರಾಷ್ಟ್ರೀಯ ಹೆದ್ದಾರಿಯಗಲೀಕರಣ ಕಾಮಗಾರಿ ಹಾಗೂ 33 ಕೆವಿ ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ಪ್ರಯುಕ್ತ ಏಪ್ರಿಲ್ 5ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರ ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಪ್ರಯುಕ್ತ ಸಾಗರ ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ,…

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್‌ ಈ‍ಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್‌ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.   ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಒಂದೇ ಬೈಕ್‌ನಲ್ಲಿ ಬಂದ…

Read More