Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

Ripponpete | ಲಂಚಕ್ಕೆ ಬೇಡಿಕೆಯಿಟ್ಟರಾ ತೂಕ ಮತ್ತು ಅಳತೆ ಮಾಪನ ಅಧಿಕಾರಿಗಳು – ಏನಿದು ಹೊಟೇಲ್ ಮಾಲೀಕನ ಆರೋಪ

Ripponpete | ಲಂಚಕ್ಕೆ ಬೇಡಿಕೆ – ತೂಕ ಮತ್ತು ಅಳತೆ ಮಾಪನ ನವೀಕರಣಗೊಳಿಸದೇ ಹಿಂದಿರುಗಿದ ಅಧಿಕಾರಿಗಳು..!!! ರಿಪ್ಪನ್‌ಪೇಟೆ;-ವರ್ಷಕ್ಕೂಮ್ಮೆ ಸರ್ಕಾರ ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಿ 250 ರೂ ಫೀ ಯನ್ನು ಗಣಕೀಕೃತ ರಶೀಧಿಯನ್ನು ನೀಡುತ್ತಾರೆ.ಇದರೊಂದಿಗೆ ಹೆಚ್ಚುವರಿಯಾಗಿ ಲಂಚದ ಹಣವನ್ನು  ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಲು  ಕೊಡಬೇಕು ಇಲ್ಲವಾದರೆ ತಕಡಿಗೆ ಮೊಹರು ಮಾಡುವುದಿಲ್ಲ ಎಂದು ಕಾನೂನು ಮಾಪನಶಾಸ್ತ ಇಲಾಖೆಯ ಅಧಿಕಾರಿಗಳು ಹೇಳಿ ತಿರಸ್ಕರಿಸಿ ವಾಪಾಸ್ಸು ಹೋದ ಘಟನೆಯೊಂದು ನಡೆದಿದೆ. ಶಿವಮೊಗ್ಗ ರಸ್ತೆಯ ಜಯಪ್ರಕಾಶ ಹೋಟಲ್ ಮತ್ತು…

Read More

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌….

Read More

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗನ ಕಾಲು ತುಂಡಾಗಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಗರ್ತಿಕೆರೆಯಲ್ಲಿ(garthikere) ಶನಿವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಅವುಕ ನಿವಾಸಿಗಳಾದ ಗಿರಿಯಪ್ಪ ಮತ್ತು ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಂಚದಕಟ್ಟೆ ಕಡೆಯಿಂದ ಗರ್ತಿಕೆರೆ ಕಡೆಗೆ…

Read More

Ripponpete | ಅನ್ನದಾತನ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ

Ripponpete | ಅನ್ನದಾತರ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅವೈಜ್ಞಾನಿಕವಾಗಿ EPT ಟ್ರಂಚ್ ತೆಗೆಯುತ್ತಿರುವ ಹಿನ್ನಲೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸ್ಥಳಕ್ಕೆ ತೆರಳಿ ಅರಣ್ಯಾಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ನಡೆದಿದೆ. ಹಾರಂಬಳ್ಳಿ ಗ್ರಾಮದಲ್ಲಿ ರೈತರು ಉಳುಮೆ ಮಾಡುತ್ತಿರುವ ಖಾತೆ ಜಾಗದಲ್ಲಿ EPT ಟ್ರಂಚ್ ಹೊಡೆಯಲಾಗುತ್ತಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದ…

Read More

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ…

Read More

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…

Read More
Exit mobile version