Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More

ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? | Election

ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? ನಟ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್​ಕುಮಾರ್​ ಅವರ…

Read More

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು  ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…

Read More