Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read More

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ ಶಿವಮೊಗ್ಗ : 17 ವರ್ಷದ ಬಾಲಕನಿಗೆ ವಾಹನ ಚಾಲನ ಪರವಾನಗಿ ಇಲ್ಲದೇ ದ್ವಿಚಕ್ರ ವಾಹನ ನೀಡಿದ್ದ ತಾಯಿಗೆ ಶಿವಮೊಗ್ಗ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿದೆ.  ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್​ಪಿಎಂ ರಸ್ತೆ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ಬಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ, ಆತ ಅಪ್ರಾಪ್ತನಾಗಿರುವುದು ಮತ್ತು ಚಲಾಯಿಸುತ್ತಿದ್ದ ಬೈಕ್​ ಆತನ…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More
Exit mobile version