Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು…

Read More

Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು ಬುಧವಾರ ಮದ್ಯಾನ್ಹ ವಿಧಿವಷರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು. ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ…

Read More

Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ

ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು  ಬುಧವಾರ ಆಯೋಜಿಸಲಾಗಿತ್ತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಈ ಅಪರೂಪದ  ಮಕ್ಕಳ ಸಂತೆ…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…

Read More

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್ ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು ಹಾಗೂ ಮರಾಠ ಸಮಾಜದ ಪ್ರಮುಖರಾದ ಸುಂದರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ…

Read More

Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…

Read More