Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Hosanagara | ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ

ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ 45 ರ ಹರೆಯದ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ ಇಂದು ಸೋಮವಾರ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯ ಪ್ಲಾಂಟೇಶನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗದವರನ್ನು ಹೊಂದಿದ್ದು ಆತನು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More

ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು ಶಿವಮೊಗ್ಗ(Shivamogga) ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್(bus) ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್‌ಎಸ್‌ಎಲ್ ಸಿ (SSLC) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.  ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್…

Read More

Humcha | ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ

ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ. 2023-24 ನೇ ಸಾಲಿನ ಪ್ರಥಮ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆ ಇದಾಗಿದ್ದು ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ. ಪಂಚಾಯತ್‌ ಅಧ್ಯಕ್ಷೆ ಸುಮಂಗಳ ರವರ  ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆ ಬೆಳಗ್ಗೆ 11-30 ಕ್ಕೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು.  ಕೋರಂ ಇಲ್ಲದೆ ಸಭೆ ನಡೆಸುವಂತಿಲ್ಲ…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

Ripponpete | ಲಂಚಕ್ಕೆ ಬೇಡಿಕೆಯಿಟ್ಟರಾ ತೂಕ ಮತ್ತು ಅಳತೆ ಮಾಪನ ಅಧಿಕಾರಿಗಳು – ಏನಿದು ಹೊಟೇಲ್ ಮಾಲೀಕನ ಆರೋಪ

Ripponpete | ಲಂಚಕ್ಕೆ ಬೇಡಿಕೆ – ತೂಕ ಮತ್ತು ಅಳತೆ ಮಾಪನ ನವೀಕರಣಗೊಳಿಸದೇ ಹಿಂದಿರುಗಿದ ಅಧಿಕಾರಿಗಳು..!!! ರಿಪ್ಪನ್‌ಪೇಟೆ;-ವರ್ಷಕ್ಕೂಮ್ಮೆ ಸರ್ಕಾರ ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಿ 250 ರೂ ಫೀ ಯನ್ನು ಗಣಕೀಕೃತ ರಶೀಧಿಯನ್ನು ನೀಡುತ್ತಾರೆ.ಇದರೊಂದಿಗೆ ಹೆಚ್ಚುವರಿಯಾಗಿ ಲಂಚದ ಹಣವನ್ನು  ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಲು  ಕೊಡಬೇಕು ಇಲ್ಲವಾದರೆ ತಕಡಿಗೆ ಮೊಹರು ಮಾಡುವುದಿಲ್ಲ ಎಂದು ಕಾನೂನು ಮಾಪನಶಾಸ್ತ ಇಲಾಖೆಯ ಅಧಿಕಾರಿಗಳು ಹೇಳಿ ತಿರಸ್ಕರಿಸಿ ವಾಪಾಸ್ಸು ಹೋದ ಘಟನೆಯೊಂದು ನಡೆದಿದೆ. ಶಿವಮೊಗ್ಗ ರಸ್ತೆಯ ಜಯಪ್ರಕಾಶ ಹೋಟಲ್ ಮತ್ತು…

Read More

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌….

Read More

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗನ ಕಾಲು ತುಂಡಾಗಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಗರ್ತಿಕೆರೆಯಲ್ಲಿ(garthikere) ಶನಿವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಅವುಕ ನಿವಾಸಿಗಳಾದ ಗಿರಿಯಪ್ಪ ಮತ್ತು ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಂಚದಕಟ್ಟೆ ಕಡೆಯಿಂದ ಗರ್ತಿಕೆರೆ ಕಡೆಗೆ…

Read More

Ripponpete | ಅನ್ನದಾತನ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ

Ripponpete | ಅನ್ನದಾತರ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅವೈಜ್ಞಾನಿಕವಾಗಿ EPT ಟ್ರಂಚ್ ತೆಗೆಯುತ್ತಿರುವ ಹಿನ್ನಲೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸ್ಥಳಕ್ಕೆ ತೆರಳಿ ಅರಣ್ಯಾಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ನಡೆದಿದೆ. ಹಾರಂಬಳ್ಳಿ ಗ್ರಾಮದಲ್ಲಿ ರೈತರು ಉಳುಮೆ ಮಾಡುತ್ತಿರುವ ಖಾತೆ ಜಾಗದಲ್ಲಿ EPT ಟ್ರಂಚ್ ಹೊಡೆಯಲಾಗುತ್ತಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದ…

Read More