Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…

Read More

Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More

Hosanagara | ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ

ಹೊಸನಗರ ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾದ  ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ  ಆಯ್ಕೆ  ರಿಪ್ಪನ್ ಪೇಟೆ : ಹೊಸನಗರ ತಾಲೂಕು ಕಾಂಗ್ರೆಸ್ ಓ ಬಿ ಸಿ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ  ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಒಬಿಸಿ ಜಿಲ್ಲಾ ಅಧ್ಯಕ್ಷರಾದ ರಮೇಶ್ ಇಕ್ಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಅವರನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ NSUI ಸಾಗರ ಕ್ಷೇತ್ರ ಘಟಕದ ಅಧ್ಯಕ್ಷರಾಗಿ  ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ…

Read More

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More