Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌…

Read More

ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್

Police have arrested two accused in the Gajanur mason murder case near Shivamogga. The killing occurred after a drunken brawl. Further investigation is underway. ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ನಡೆದ ಗಾರೆ ಮೇಸ್ತ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಗುರುವಾರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಬಿನ್ ಗಂಗಾಧರ (36) ಅವರನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case. ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank…

Read More

ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು

MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…

Read More

ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

Lokayukta officials conducted simultaneous raids on the houses, office and properties of BESCOM AEE R.H. Arjun in Davanagere and Shivamogga over allegations of disproportionate assets. Document verification is ongoing. ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ ದಾವಣಗೆರೆ/ಶಿವಮೊಗ್ಗ: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ದಾವಣಗೆರೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಅರ್ಜುನ್‌…

Read More

ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development. ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು. ಹೊಸನಗರ ವಿಧಾನಸಭಾ ಕ್ಷೇತ್ರ…

Read More

ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು

HosaNagara JMFC Court granted bail to Rajesh Hirimane, accused in a social media post case involving alleged derogatory content against Lok Sabha Opposition Leader Rahul Gandhi. ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More