Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…

Read More

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…

Read More

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ :  ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…

Read More

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ   ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ  ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು…

Read More

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read More

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read More

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್  ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…

Read More