Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್‌ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete

ರಿಪ್ಪನ್‌ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್‌ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…

Read More

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read More

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More