Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ | Facebook

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ…

Read More

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ  50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು  ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ  ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ  ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡನಿಗೆ ಸಂಸದ ಬಿ. ವೈ. ರಾಘವೇಂದ್ರ ಗೌರವಿಸಿ ಸನ್ಮಾನಿಸಿದರು. ಪ್ರೋ ಕಬ್ಬಡಿ ಹತ್ತನೇ ಸೀಸನ್ ನಲ್ಲಿ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿ 13 ಪಂದ್ಯಗಳಲ್ಲಿ 90…

Read More

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…

Read More