Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಶ್ರೇಷ್ಠವಾದದನ್ನು ಸಾಧಿಸುವ ತುಡಿತ ಇರಬೇಕು ಜೊತೆಗೆ ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು ಎಂದು ಎಂದು ಮಳಲಿ ಮಠದ ಡಾ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು. ಇಲ್ಲಿನ ಸಮೀಪದ ಹೆದ್ದಾರಿಪುರ ಸಾವಿತ್ರಮ್ಮ ಶ್ರೀ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರತಿಯೊಬ್ಬರಲ್ಲಿ ಒಂದು ಗುರಿ…

Read More

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ…

Read More

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –  ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More