Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More
Exit mobile version