Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Thirthahalli | ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ

ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರೆಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್ ಗೆ ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ …

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…

Read More

Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿ ಮೂವರಿಗೆ ಗಾಯವಾದ ಘಟನೆ ನಡೆದಿದೆ. ಪಿಳ್ಳಂಗೇರಿ ಗ್ರಾಮದ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿಯಾಗಿದೆ.  ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More